ಡಾ.ರಾಜೇಂದ್ರ ಕೆ.ವಿ ದ.ಕ ನೂತನ ಡಿಸಿ, ಜಿಲ್ಲಾಧಿಕಾರಿ ಸಿಂಧೂ ದಿಢೀರ್ ವರ್ಗಾವಣೆ


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದ್ದು ಅವರ ಸ್ಥಾನಕ್ಕೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಓ ಆಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.


ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.ಡಾ. ರಾಜೇಂದ್ರ ಕೆ.ವಿ ಅವರು ಈ ಹಿಂದೆ ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ  ಕರ್ತವ್ಯ ನಿರ್ವಹಿಸಿದ್ದರು.

Comments